180 kannada ogatugalu with answer ಕನ್ನಡ ಒಗಟುಗಳು : 180 ವಿಚಾರಪ್ರಚೋದಕ ಪ್ರಶ್ನೆಗಳು

Meaningful Kannada Riddles: 180 Thought-Provoking Questions

ಕನ್ನಡ ಒಗಟುಗಳು

ಒಗಟು ಜನಪದ ಸಾಹಿತ್ಯದಲ್ಲಿ ಒಂದು ಮುಖ್ಯವಾದ ಪ್ರಕಾರ (ರಿಡ್ಲ್‌). ಕನ್ನಡದಲ್ಲಿ ಒಡಪು, ಮುಂಡಿಗೆ ಎಂಬ ಬೇರೆ ಹೆಸರಗಳೂ ಉಂಟು. ಒಗಟು ಎಂದರೆ ಒಬ್ಬರು ಮತ್ತೊಬ್ಬರಿಗೆ ಒಡ್ಡಿದ ಸವಾಲು, ಸಮಸ್ಯೆ ಒಂದು ವಸ್ತುವನ್ನು ಮತ್ತೊಂದು ವಸ್ತುವಿನ ಮೂಲಕ  ಚಮತ್ಕಾರವಾಗಿ ವರ್ಣಿಸಿ ಆ ಅವ್ಯಕ್ತ ವಸ್ತುವನ್ನು ಕಂಡುಹಿಡಿಯುವಂತೆ ಹೇಳುವುದು ಇದರ ಕ್ರಮ. ಒಗಟಿನಲ್ಲಿ ಎರಡು ಸದೃಶವಸ್ತುಗಳಿರಬೇಕು ಒಂದು ಉಪಮಾನ, ಮತ್ತೊಂದು ಉಪಮೇಯ. ಇಲ್ಲಿ ಉಪಮಾನ ವಾಚ್ಯವಾಗಿರುತ್ತದೆ; ಉಪಮೇಯ ಅಸ್ಪಷ್ಟವಾಗಿ ರಹಸ್ಯವಾಗಿರುತ್ತದೆ. ಅದನ್ನು ಒಗಟೆಯ ಕರ್ತೃ ಬಹಳ ಜಾಣ್ಮೆಯಿಂದ ಬಚ್ಚಿಟ್ಟಿರುತ್ತಾನೆ. ಉಪಮಾನದ ಆಧಾರದಿಂದ ಉಪಮೇಯವನ್ನು ಪತ್ತೆಮಾಡಬೇಕಾಗುತ್ತದೆ. ಇದು ಬುದ್ಧಿಶಕ್ತಿಯ ಪರೀಕ್ಷೆಗೊಂದು ಒಳ್ಳೆಯ ಒರೆಗಲ್ಲು.

ಮಾನವಕುಲದ ಬಾಲ್ಯದಲ್ಲೆ ಒಗಟು ಹುಟ್ಟಿತೆಂದು ಹೇಳಬಹುದು. ಮಾತಿನ ಸಂಪ್ರದಾಯದಲ್ಲಿ ಒಗಟೆಯೇ ಎಲ್ಲಕಿಂತ ಮೊದಲಿನದೆಂಬ ಅಭಿಪ್ರಾಯವೂ ಉಂಟು. ಆದಿಮಾನವ ಪ್ರಕೃತಿಯ ವಸ್ತುಗಳಲ್ಲಿ ಗುರುತಿಸಿದ ಸಾದೃಶ್ಯವೆ ಒಗಟುಗಳ ನಿರ್ಮಾಣಕ್ಕೆ ತಳಹದಿ. ಅವನು ಸಾದೃಶ್ಯಜ್ಞಾನದಿಂದುಂಟಾದ ವಿಸ್ಮಯದಲ್ಲೆ ನಿಲ್ಲದೆ, ಅದನ್ನು ಹಾಸ್ಯ ಮತ್ತು ಮನೋರಂಜನೆಗಾಗಿ ಬಳಸಿಕೊಳ್ಳಲು ಮಾಡಿದ ಪ್ರಯತ್ನವೆ ಒಗಟಿನ ರೂಪ ತಳೆಯಿತು. ಈಗ ನಮಗೆ ಗೊತ್ತಿರುವ ಹಾಸ್ಯದ ಪ್ರಕಾರಗಳಲ್ಲಿ ಒಗಟೇ ಅತ್ಯಂತ ಪ್ರಾಚೀನವೆಂದೂ ಸಾದೃಶ್ಯಪ್ರಜ್ಞೆಯೆ ಇದಕ್ಕೆ ಮೂಲಕಾರಣವೆಂದೂ ವಿದ್ವಾಂಸರ ಅಭಿಪ್ರಾಯ. ಒಗಟುಗಳು ಬಹುಮಟ್ಟಿಗೆ ಬುದ್ಧಿಪುರ್ವಕವಾದವು; ಬುದ್ಧಿಯ ವಿಕಾಸಕ್ಕೆ ನೆರವಾಗುತ್ತವಾದರೂ ಕೇವಲ ಸಂತೋಷವೆ ಅವುಗಳ ಮುಖ್ಯವಾದ ಗುರಿ. ಒಗಟುಗಳಲ್ಲಿ ಎರಡು ವಸ್ತುಗಳ ತರ್ಕಬದ್ಧ ಸಮೀಕರಣವಿರುತ್ತದೆ.

ಎಷ್ಟೋ ವೇಳೆ, ಒಗಟುಗಳ ಅಂತರಾರ್ಥ ಸುಲಭವಾಗಿ ಹೊಳೆಯದಿದ್ದರೂ ಅವುಗಳ ಬಾಹ್ಯರೂಪ ಮಾತ್ರ ಆಕರ್ಷಕವಾಗಿ ಕುತೂಹಲ ಕೆರಳಿಸುವಂತಿರುತ್ತದೆ. ಒಗಟುಗಳಲ್ಲಿ ಹಲವು ಬಗೆಗಳಿವೆ. ಕೆಲವು ಪದ್ಯರೂಪದಲ್ಲಿದ್ದರೆ ಮತ್ತೆ ಕೆಲವು ಲಯಬದ್ಧ ಗದ್ಯದಲ್ಲಿರುತ್ತವೆ.

ಒಗಟುಗಳ ಇತಿಹಾಸ ಜಾಗತಿಕವಾದುದು. ಪ್ರಪಂಚದ ಅತ್ಯಂತ ಪ್ರಾಚೀನ ಜನಾಂಗಗಳಲ್ಲೆಲ್ಲ ಅವು ಬಳಕೆಯಲ್ಲಿದ್ದುವು. ಭರತಖಂಡದಲ್ಲಿ ಮಾತ್ರವಲ್ಲದೆ ಗ್ರೀಕ್, ರೋಮನ್, ಈಜಿಪ್ಷಿಯನ್ ಜನಾಂಗಗಳಲ್ಲಿ ಕೂಡ ಒಗಟುಗಳ ಸಾಹಿತ್ಯ ವಿಪುಲವಾಗಿತ್ತು. ಭಾರತದಲ್ಲಿ ವೈದಿಕ ವಾಙ್ಮಯದಲ್ಲೆ ಒಗಟುಗಳು ಸುಳಿಯುತ್ತವೆ. ಕುರಾನ್, ಬೈಬಲ್ಗಳಲ್ಲೂ ಅವು ಬಂದಿವೆಯೆಂದು ಹೇಳುತ್ತಾರೆ.

ogatu in kannada

ಒಗಟುಗಳು ಪ್ರಾಚೀನಕಾಲದಿಂದಲೂ ಧಾರ್ಮಿಕ ವಿಧಿ ಉತ್ಸವಗಳಿಗೆ ಸಂಬಂಧಿಸಿದಂತೆ, ಅಲೌಕಿಕ ಉದ್ದೇಶಗಳಿಗೆ ಮಾಧ್ಯಮವಾಗಿ ಬಳಕೆಯಾಗುತ್ತ ಬಂದಿರುವುದು ಆಶ್ಚರ್ಯದ ಸಂಗತಿ. ಅವು ಆಧ್ಯಾತ್ಮಿಕ ಸತ್ಯಗಳಿಗೆ, ವೇದಾಂತ ರಹಸ್ಯಗಳಿಗೆ ಅಭಿವ್ಯಕ್ತಿ ನೀಡಿವೆ. ಗ್ರೀಕರಲ್ಲಿ ಡೆಲ್ಫಿಯ ಭವಿಷ್ಯವಾಣಿ ಪುರೋಹಿತರ ಮೂಲಕ ಒಗಟುಗಳ ರೂಪದಲ್ಲೆ ಹೊರಹೊಮ್ಮುತ್ತಿತ್ತು. ಭರತಖಂಡದ ವೈದಿಕ ಯಜ್ಞಯಾಗಾದಿಗಳಲ್ಲಿ ಒಗಟುಗಳ ಸಂಪ್ರದಾಯವಿದ್ದುದು ತಿಳಿದುಬರುತ್ತದೆ. ಕನ್ನಡದಲ್ಲಿ ಅಲ್ಲಮಪ್ರಭುವಿನ ಎಷ್ಟೋ ವಚನಗಳು ಬಹಳ ಗಹನವಾಗಿದ್ದು

ಬೆಡಗಿನ ವಚನಗಳೆನಿಸಿಕೊಂಡು, ಅನುಭಾವಗಳಿಗೆ ಪ್ರತೀಕಗಳಾಗಿವೆ; ಇವೂ ಒಗಟುಗಳೇ.

ಒಗಟು ಕೇಳುಗರನ್ನು ಕುತೂಹಲಕ್ಕೆ ತಳ್ಳಿ, ಆಸಕ್ತಿಯನ್ನು ಅರಳಿಸಿ, ಅವರ ಬುದ್ಧಿಯನ್ನು ಕೆಣಕುತ್ತದೆ. ಕಂಬದ ಮೇಲೆ ನಿಂಬೆಹಣ್ಣು-ಎಂದಾಗ ಲವಂಗವೆಂಬ ಅರ್ಥ ಹೊಳೆಯುವುದು ಕಷ್ಟವಾಗಬಹುದು. ಹಾಗೆಯೇ ಮುದ್ದು ಮಗುವಿನ ಕೆನ್ನೆಯನ್ನು ತಿನ್ನಬಾರದ ಹಣ್ಣು ಬಲುರುಚಿ, ಬಲುರುಚಿ ಎಂದು ಬಣ್ಣಿಸಿ ಚಪ್ಪರಿಸುವುದೂ ಒಗಟಿನ ರೀತಿ, ಒಂದು ಪದಗಳ ಗುಂಪು, ಒಂದು ವಾಕ್ಯ ಅಥವಾ ಒಂದು ಇಡೀ ಪದ್ಯವೇ ಒಗಟಾಗಿರಬಹುದು. ಕೆಲವು ಕವಿಗಳಂತೂ ತಮ್ಮ ಕೃತಿಗಳಲ್ಲಿ ಇಂಥ ಚಾತುರ್ಯದ ಉಕ್ತಿಗಳನ್ನು ಸೊಗಸಾಗಿ ಬಳಸಿಕೊಂಡಿದ್ದಾರೆ.

ಲಕ್ಷ್ಮೀಶನ ಈ ಸಾಲುಗಳನ್ನು ನೋಡಿ; ಹರಿಯೆನ್ನ ಭಾವ; ವಿಧಿಯೆನಗೆ ಅಳಿಯ; ಜಲಧಿಯೆನಗೆ ಮಾತೆ; ಲಕ್ಷ್ಮಿಯೆನಗೆ ಸೋದರಿ; ಸುಧಾಕರ ನನಗೆ ಹಿರಿಯಣ್ಣ-ಈ ಐವರಿದ್ದೂ ನಾನೀ ತಿರುಕನ ಕೈಗೆ ಸಿಕ್ಕಿ ನರಳುವಂತಾಯ್ತೆ ಎಂಬಲ್ಲಿ ಹುದುಗಿದ ಹೂರಣದ ರುಚಿ ಎರಡು ವಿಧ.

ಕೀರ್ತನೆಯ ಒಂದು ಭಾಗವನ್ನು ನೋಡಬಹುದು:

* ಅಂಧಕನನುಜನ ಕಂದನ ತಂದೆಯ, ಕೊಂದನ ಶಿರದಲ್ಲಿ ನಿಂದವನ | ಚಂದದಿ ಪಡೆದನ ನಂದನೆಯಳ ನಲ | ವಿಂದ ಧರಿಸಿದ ಮುಕುಂದನಿಗೆ ||

ಧೃತರಾಷ್ಟ್ರನ ತಮ್ಮನಾದ ಪಾಂಡುವಿನ ಮಗ ಧರ್ಮರಾಯನ ತಂದೆಯಾದ ಯಮ ಧರ್ಮರಾಯನನ್ನು ನಿಗ್ರಹಿಸಿದ (ಮಾರ್ಕಂಡೇಯನ ಕಥೆಯಲ್ಲಿ) ಈಶ್ವರನ ತಲೆಯ ಮೇಲೆ ನಿಂದ ಚಂದ್ರನನ್ನು ಪಡೆದ ತಂದೆಯಾದ ಸಮುದ್ರರಾಜನ ಮಗಳಾದ ಲಕ್ಷ್ಮಿಯನ್ನು ಆನಂದದಿಂದ ಹೃದಯದಲ್ಲಿ ಧರಿಸಿದ ಮುಕುಂದನಿಗೆ ಮಂಗಳಂ-ಎಂದು ಕನಕದಾಸರು ಇಲ್ಲಿ ಒಗಟುಗಂಟನ್ನೇ ಸೃಜಿಸಿದ್ದಾರೆ, ಈಗಲೂ ಒಗಟುಗಳೆಂದರೆ ಮಕ್ಕಳಿಗೆ ಪ್ರಾಣ, ದೊಡ್ಡವರಿಗೆ ಆಸಕ್ತಿ, ಸಂಸ್ಕೃತ ಸಾಹಿತ್ಯದಲ್ಲಿನ ವಿಚಿತ್ರ ಪದಬಂಧಗಳು, ಸಮಸ್ಯಾಪುರ್ಣ, ತೆಲುಗರಲ್ಲಿ ಹೆಚ್ಚು ಪ್ರಚಾರವಿರುವ ದಶಾವಧಾನ, ಶತಾವಧಾನ-ಇವುಗಳೆಲ್ಲ ಒಗಟಿನ ಬೃಹದ್ರೂಪಗಳು, ಮಹಾಕವಿಗಳು ಕೂಡ ಒಗಟುಗಳಿಂದ ಆಕರ್ಷಿತರಾಗಿರುವರು. ಭಾಸನ ನಾಟಕಗಳ ಮೊದಲ ಶ್ಲೋಕದಲ್ಲಿ ಶ್ಲೇಷೆಯ ಬಳಕೆಯಿಂದ ಒಗಟು ಸೃಷ್ಟಿಯಾಗಿದೆ. ಕಾಳಿದಾಸನಲ್ಲಿಯೂ ಇದನ್ನು ಕಾಣುತ್ತೇವೆ. ಪಂಪ, ಕುಮಾರವ್ಯಾಸ ಮುಂತಾದವರಲ್ಲಿಯೂ ಒಗಟುಗಳ ಬಳಕೆ ಸ್ಪಷ್ಟವಾಗಿದೆ. ಮಾತಿನ ಚಾಣಕ್ಯತನ ಇದ್ದಲ್ಲಿ ಯಕ್ಷಪ್ರಶ್ನೆಯಾಗಿ ಒಗಟು ಆವಿರ್ಭವಿಸುತ್ತದೆನ್ನಬಹುದು.

 

ಚತುರ ಕನ್ನಡಿಗನಿಗಾಗಿ: 180 ಅರ್ಥಪೂರ್ಣ ಒಗಟುಗಳು

ಕನ್ನಡ ಜನಪದದಲ್ಲಿ ಪ್ರಚಲಿತವಾಗಿರುವ ಕೆಲವು ಒಗಟುಗಳನ್ನಿಲ್ಲಿ ಉದಾಹರಿಸಲಾಗಿದೆ; ಅಂಗೈ ಅಗಲದ ಗದ್ದೆ, ಗದ್ದೆಗೆ ನೀರು, ನೀರಿಗೆ ಬೇರು, ಬೇರಿಗೆ ಬೆಂಕಿ (ದೀಪ); ಚಿನ್ನದ ಪೆಟ್ಟಿಗೆಯಲ್ಲಿ ಬೆಳ್ಳಿ ಲಿಂಗ (ಹಲಸಿನ ತೊಳೆ); ಹಸುರು ಗಿಡದ ಮೇಲೆ ಮೊಸರು ಚೆಲ್ಲಿದೆ (ಮಲ್ಲಿಗೆ ಹೂ); ಗಿಡ್ಡಿ ಗುದ್ದಿದರೆ ಮನೆಯೆಲ್ಲ ಮಕ್ಕಳು (ಬೆಳ್ಳುಳ್ಳಿ); ಹಗ್ಗ ಹಾಸಿದೆ, ಕೋಣ ಮಲಗಿದೆ (ಕುಂಬಳಕಾಯಿ); ಸುತ್ತ ನೋಡಿದರೆ ಸುಣ್ಣದ ಗೋಡೆ, ಎತ್ತ ನೋಡಿದ್ರೂ ಬಾಗಿಲೇ ಇಲ್ಲ (ಕೋಳಿಮೊಟ್ಟೆ); ಕೆರೆಯೆಲ್ಲ ಕುರಿಹೆಜ್ಜೆ (ನಕ್ಷತ್ರ).

೧. ಗೂಡಿನಲ್ಲಿನ ಪಕ್ಷಿ ನಾಡೆಲ್ಲ ನೋಡುತ್ತದೆ- ಕಣ್ಣು

೨. ಕಾಸಿನ ಕುದುರೆಗೆ ಬಾಲದ ಲಗಾಮು- ಸೂಜಿ ದಾರ

೩. ಎಲೆ ಇಲ್ಲ, ಸುಣ್ಣ ಇಲ್ಲ, ಬಣ್ಣವಿಲ್ಲ ತುಟಿ ಕೆಂಪಗಾಗಿದೆ, ಮಳೆಯಿಲ್ಲ , ಬೆಲೆಯಿಲ್ಲ , ಮೈ ಹಸಿರಾಗಿದೆ- ಗಿಳಿ

೪. ಮನೆ, ಮನೆಗೆರಡು ಬಾಗಿಲು, ಬಾಗಿಲ ಮುಂದೆ , ಮುಚ್ಚಿದರೆ ಹಾನಿ ಇದೇನು?- ಮೂಗು, ಬಾಯಿ

೫. ಸುತ್ತ ಮುತ್ತ ಸುಣ್ಣದ ಗೋಡೆ, ಎತ್ತ ನೋಡಿದರೂ ಬಾಗಿಲಿಲ್ಲ ಇದು ಏನು?- ಮೊಟ್ಟೆ

೬. ಅಂಗಳದಲ್ಲಿ ಹುಟ್ಟುವುದು, ಅಂಗಳದಲ್ಲಿ ಬೆಳೆಯುವುದು, ತನ್ನ ಮಕ್ಕಳ ಹಂಗಿಸಿ ಮಾತಾಡುವುದು ಇದು ಏನು?- ಕೋಳಿ

೭. ಇದ್ದಲು ನುಂಗುತ್ತ , ಗದ್ದಲ ಮಾಡುತ್ತಾ, ಉದ್ದಕ್ಕೂ ಓಡುತ್ತಾ ಮುಂದಕ್ಕೆ ಸಾಗುವ ನಾನ್ಯಾರು?- ರೈಲು

೮. ಊಟಕ್ಕೆ ಕುಳಿತವರು ಹನ್ನೆರಡು ಜನರು, ಬಡಿಸುವವರು ಇಬ್ಬರು, ಒಬ್ಬನು ಒಬ್ಬರಿಗೆ ಬಡಿಸುವಸ್ಟರಲ್ಲಿ ಇನ್ನೊಬ್ಬನು ಹನ್ನೆರಡು ಜನಕ್ಕೂ ಬಡಿಸಿರುತ್ತಾನೆ- ಗಡಿಯಾರ

೯. ಹಸಿರು ಹಾವರಾಣಿ, ತುಂಬಿದ ತತ್ರಾಣಿ, ಹೇಳದಿದ್ದರೆ ನಿಮ್ಮ ದೇವರಾಣಿ- ಕಲ್ಲಂಗಡಿ ಹಣ್ಣು

೧೦. ಮೊಟ್ಟೆ ಒಡೆಯೋ ಹಾಗಿಲ್ಲ ಕೊಡ ಮುಳುಗಿಸೋ ಹಾಗಿಲ್ಲ ಬರಿ ಕೊಡೆ ತಗೊಂಡು ಬಾರೋ ಹಾಗಿಲ್ಲ-ತೆಂಗು

೧೨. ಕಡಿದರೆ ಕಚ್ಚೋಕೆ ಆಗೋಲ್ಲ , ಹಿಡದ್ರೆ ಮುಟ್ಟೋಕೆ ಸಿಗೋಲ್ಲ-ನೀರು

೧೩.ಒಂದು ರುಮಾಲು ನಮ್ಮಪ್ಪನೂ ಸುತ್ತಲಾರ.-ದಾರಿ

೧೪. ಅಬ್ಬಬ್ಬ ಹಬ್ಬ ಬಂತು, ಸಿಹಿಕಹಿ ಎರಡೂ ತಂತು.-ಯುಗಾದಿ

೧೫. ಹುಟ್ಟುತ್ತಲೇ ಹುಡುಗ ತಲೆಯಲ್ಲಿ ಟೋಪಿ ಹಾಕಿರುತ್ತೆ .-ಬದನೆಕಾಯಿ.

೧೬. ಸಾಗರ ಪುತ್ರ ,ಸಾರಿನ ಮಿತ್ರ.-ಉಪ್ಪು

 

ಸುತ್ತುತ್ತಿರುವ ಮಾತುಗಳು: 180 ಕನ್ನಡದ ಒಗಟುಗಳು

ಜನಪದ ಸಾಹಿತ್ಯದಲ್ಲಿ ಒಂದು ಮುಖ್ಯವಾದ ಪ್ರಕಾರ (ರಿಡ್ಲ್‌). ಕನ್ನಡದಲ್ಲಿ ಒಡಪು, ಮುಂಡಿಗೆ ಎಂಬ ಬೇರೆ ಹೆಸರಗಳೂ ಉಂಟು. ಒಗಟು ಎಂದರೆ ಒಬ್ಬರು ಮತ್ತೊಬ್ಬರಿಗೆ ಒಡ್ಡಿದ ಸವಾಲು, ಸಮಸ್ಯೆ ಒಂದು ವಸ್ತುವನ್ನು ಮತ್ತೊಂದು ವಸ್ತುವಿನ ಮೂಲಕ ಚಮತ್ಕಾರವಾಗಿ ವರ್ಣಿಸಿ ಆ ಅವ್ಯಕ್ತ ವಸ್ತುವನ್ನು ಕಂಡುಹಿಡಿಯುವಂತೆ ಹೇಳುವುದು ಇದರ ಕ್ರಮ. ಒಗಟಿನಲ್ಲಿ ಎರಡು ಸದೃಶವಸ್ತುಗಳಿರಬೇಕು ಒಂದು ಉಪಮಾನ, ಮತ್ತೊಂದು ಉಪಮೇಯ. ಇಲ್ಲಿ ಉಪಮಾನ ವಾಚ್ಯವಾಗಿರುತ್ತದೆ; ಉಪಮೇಯ ಅಸ್ಪಷ್ಟವಾಗಿ ರಹಸ್ಯವಾಗಿರುತ್ತದೆ. ಅದನ್ನು ಒಗಟೆಯ ಕರ್ತೃ ಬಹಳ ಜಾಣ್ಮೆಯಿಂದ ಬಚ್ಚಿಟ್ಟಿರುತ್ತಾನೆ. ಉಪಮಾನದ ಆಧಾರದಿಂದ ಉಪಮೇಯವನ್ನು ಪತ್ತೆಮಾಡಬೇಕಾಗುತ್ತದೆ. ಇದು ಬುದ್ಧಿಶಕ್ತಿಯ ಪರೀಕ್ಷೆಗೊಂದು ಒಳ್ಳೆಯ ಒರೆಗಲ್ಲು.

 

೧೭. ಸಾವಿರಾರು ಹಕ್ಕಿಗಳು, ಒಂದೇ ಬಾರಿಗೆ ನೀರಿಗಿಳಿತವೆ.-ಅಕ್ಕಿ

೧೮. ಗುಡುಗು, ಗುಡುಗಿದರೆ ಸಾವಿರ ನಯನಗಳು ಅರಳುವುದು.-ನವಿಲು.

೧೯. ಕಣ್ಣಿಲ್ಲ, ಕಾಲಿಲ್ಲ ,ಆದರು ಚಲಿಸುತಿದೆ ಯಾವುದು ಎಲ್ಲಿದೆ ಬಲ್ಲಿದನ ಹೇಳಿರಲ.-ನದಿ

೨೦. ಹಲ್ಲಿಲ್ಲದ ಹಕ್ಕಿಗೆ ಗೂಡು ತುಂಬ ಮರಿಗಳು.- ಕೋಳಿ

೨೧. ಮೋಟು ಗೋಡೆ ಮೇಲೆ, ದೀಪ ಉರೀತಿದೆ.- ಮೂಗುಬೊಟ್ಟು

೨೨. ಹೊಂಚು ಹಾಕಿದ ದೆವ್ವ, ಬೇಡ ಬೇಡ ಎಂದರೂ ಜೂತೆಯೇ ಬರುತ್ತೆ.-ನೆರಳು

೨೩. ಮರನು ಮರನೇರಿ ಮತ್ತೆ ಮರನೇರಿ ಬಸವನಾ ಕತ್ತೇರಿ ತಿರುಗುತ್ತಿದೆ-ಗಾಣ

೨೪. ಹೊಕ್ಕಿದ್ದು ಒಂದಾಗಿ ಹೊರಟಿದ್ದು ಅದು ನೂರಾಗಿ-ಶ್ಯಾವಿಗೆ

೨೫. ಮಣ್ಣು ಆಗಿದೆ ಕಲ್ಲು ಸಿಕ್ಕಿತು, ಕಲ್ಲು ಆಗಿದೆ ಬೆಳ್ಳಿ ಸಿಕ್ಕಿತು, ಬೆಳ್ಳಿ ಒಡೆದ ನೀರು ಸಿಕ್ಕಿತು-ತೆಂಗಿನಕಾಯಿ

೨೬. ಕತ್ತಲೆ ಮನೆಯಲಿ ಕಾಳವ್ವ ಕುಂತವ್ಳೆ ಕುಯ್ಯೋ, ಮರ್ರೋ ಅಂತವಳೇ-ತಂಬೂರಿ

೨೭. ಹಾರಿದರೆ ಹನುಮಂತ, ಕೂತರೆ ಮುನಿ, ಕೂಗಿದರೆ ಕಾಡಿನ ಒಡೆಯ-ಕಪ್ಪೆ

೨೮. ಕೈಲಿದ್ದಾಗ ಗುದಿಸಾಡುತ್ತೇನೆ, ಕೈ ಬಿಟ್ಟಾಗ ಗೊರಕೆ ಒಡೆಯುತ್ತೇನೆ-ಕಸಪೊರಕೆ

೨೯. ಗಿಡ ಕೊಡಲಾರದು, ಮರ ಬೆಳೆಸಲಾರದು ಅದಿಲ್ಲದೆ ಊಟ ಸೇರಲಾರದು-ಉಪ್ಪು

೩೦. ನೀರಿಲ್ಲದ ಸಮುದ್ರ, ಜನರಿಲ್ಲದ ಪಟ್ಟಣ, ಸಂಚಾರವಿಲ್ಲದ ಮಾರ್ಗಗಳು ಎಲ್ಲಿ?-ನಕ್ಷೆ

ಹಾಸ್ಯ ಒಗಟುಗಳು with answer

ಚತುರತೆಯ ಮಾತಿನ ಹಿಂದಿನ ಅರ್ಥಗ್ರಹಿಸಿದ ಆನಂದ ಒಂದು ಕಡೆ; ಅದರ ಹಿಂದಿರುವ ನೀತಿಯ ಸೂಚನೆ ಮತ್ತೊಂದು ಕಡೆ. ಎರಡರಿಂದಲೂ ಸಂತೋಷ ಉಕ್ಕುತ್ತದೆ. ವಿಷ್ಣು ನನಗೆ ಭಾವ. ಬ್ರಹ್ಮ ಅಳಿಯ, ಸಮುದ್ರವೇ ತಾಯಿ, ಲಕ್ಷ್ಮಿ ಸೋದರಿ, ಚಂದ್ರನು ಅಣ್ಣ-ಇಂಥ ದೊಡ್ಡ ದೊಡ್ಡ ನಂಟರಿದ್ದರೂ ನನ್ನ ಹಣೆಯಬರೆಹ-ತಿರುಕನ ಕೈಯಲ್ಲಿ ಸಿಕ್ಕಿಕೊಂಡು ಅವನ ಬಾಯ ಉಸಿರಿಗೆ ಪಕ್ಕಾಗಿ ನರಳಬೇಕಾಯಿತಲ್ಲ ಎಂದು ಶಂಖ ತನ್ನ ಗೋಳನ್ನು ತೋಡಿಕೊಳ್ಳುವ ಈ ಭಾಗ ತುಂಬ ರಸವತ್ತಾಗಿದೆ, ನೀತಿಯುತವಾಗಿದೆ. ಹೀಗೆಯೇ ಎಷ್ಟೋ ಒಗಟುಗಳು ನಾಣ್ಣುಡಿಗಳಾಗಿವೆ. ಮಾತಿನ ಚಕಮಕಿಯಿಂದಲೂ ಒಗಟುಗಳು ಸೃಷ್ಟಿಯಾಗುತ್ತವೆ. ಪುರಸೀ, ಹೊರಸೀ, ಒಳಸೀ ಎಂಬ ಮೂರು ವಸ್ತುಗಳನ್ನು ತನ್ನಿರೆಂದು ಗುರು ಹೇಳಿದಾಗ ಶಿಷ್ಯರು ಒದ್ದಾಡಿದರಂತೆ, ಜಾಣನಾದ ಶಿಷ್ಯ ಮಾತ್ರ ಕಲ್ಲುಸಕ್ಕರೆ, ಖರ್ಜೂರ, ಬಾದಾಮಿಗಳನ್ನು ತಂದನಂತೆ. ಕಲ್ಲು ಸಕ್ಕರೆ ಪುರ ಸಿಹಿ, ಖರ್ಜೂರ ಹೊರಗೆ ಮಾತ್ರ ಸಿಹಿ, ಬಾದಾಮಿ ಒಳಗೆ ಮಾತ್ರ ಸಿಹಿ. ಇಂಥ ಒಗಟಿನ ಅನೇಕ ಕಥೆಗಳು ಪ್ರಚಾರದಲ್ಲಿವೆ. ಇಡೀ ಪದ್ಯದಲ್ಲಿ ಈ ರೀತಿಯ ಒಗಟನ್ನು ತುಂಬಿರುವ ಒಂದು ಉದಾಹರಣೆಯಾಗಿ ಕನಕದಾಸರ

೩೧. ಒಬ್ಬನನ್ನು ಹಿಡಿದರೆ ಎಲ್ಲಾರ ಮರ್ಜಿಯು ಗೊತ್ತಾಗುತ್ತದೆ.- ಅನ್ನದ ಅಗುಳು.

೩೨. ಮೇಲೆ ನೋಡಿದರೆ ನಾನಾ ಬಣ್ಣ, ಉಜ್ಜಿದರೆ ಒಂದೇ ಬಣ್ಣ.-ಸಾಬೂನು.

೩೩. ಒಂದು ಕೊಂಬಿನ ಗುಳಿ ಅದರ ತಲೆಯೆಲ್ಲಾ ಮುಳ್ಳು.-ಬದನೆಕಾಯಿ.

೩೪. ನಾನು ತುಳಿದೆ ಅದನ್ನ, ಅದು ತುಳಿಯೆತು ನನ್ನನ್ನ.-ನೀರು

೩೫. ಕೊಳದ ಒಳಗೆ ಒಂದು ಮರ ಹುಟ್ಟಿ ,ಬೇರು ಇಲ್ಲ ,ನೀರು ಇಲ್ಲ.-ಎಣ್ಣೆ ದೀಪ.

೩೬. ಬಡ ಬಡ ಬಂದ ಅಂಗಿ ಕಳಚಿದ ,ಬಾವಿಯೊಳಗೆ ಬಿದ್ದ.-ಬಾಳೆ ಹಣ್ಣು.

೩೭. ನೋಡಿದರೆ ನೋಟಗಳು ,ನಕ್ಕರೆ ನಗುಗಳು ,ಒಡೆದರೆ ತುಂಡುಗಳು.-ಕನ್ನಡಿ

೩೮. ಅಕ್ಕ ಪಕ್ಕ ಚದುರಂಗ ,ಅದರ ಹೂವು ಪದುರಂಗ ಅದರ ಹೆಸರು ಅಯ್ಯಯ್ಯಪ್ಪ .ಇದು ಏನು?-ದತ್ತುರಿಯ ಮುಳ್ಳು.

೩೯. ವನದಲ್ಲಿ ಹುಟ್ಟಿ ,ವನದಲ್ಲಿ ಬೆಳೆದು ,ವನದಿಂದ ಹೊರಟು ವನಜಲೊನೆ ಶಿರಕ್ಕೆರುವರು.-ಕಮಲ.

೪೦. ಕಲ್ಲು ಕೋಳಿ ಕುಗುತ್ತದೆ, ಮುಲ್ಲ ಚೂರಿ ಹಾಕುತ್ತಾನೆ.-ಗಿರಣಿ

೪೧. ಸಾವಿರ ತರುತ್ತೆ ಲಕ್ಷ ತರುತ್ತೆ ನೀರಿನಲ್ಲಿ ಹಾಕಿದರೆ ಸಾಯುತ್ತೆ.-ದುಡ್ಡು.

೪೨. ತಕ್ಕಡೀಲಿ ಇಟ್ಟು ಮಾರೋ ಹಾಗಿಲ್ಲ, ಅದಿಲ್ಲದೆ ಹಬ್ಬ ಅಗೋ ಹಾಗಿಲ್ಲ.-ಸಗಣಿ.

೪೩. ಚರಚರ ಕೊಯ್ತದೆ ಕತ್ತಿ ಅಲ್ಲ, ಮಿಣಿಮಿಣಿ ಮಿಂಚುತ್ತದೆ ಮಿಂಚಲ್ಲ, ಪೆಟ್ಟಿಗೆಗೆ ತುಂಬ್ತದೆ ದಾಗಿನ ಅಲ್ಲ.- ಗರಗಸ.

೪೪. ಕಡ್ಲೆ ಕಾಳಷ್ಟು ಹಿಂಡಿ೩೨ ಮನೆ ಸಾರಿಸಿ ಬಚ್ಚಲ ಪಾಲು ಆಗುತ್ತೆ.-ಹಲ್ಲುಪುಡಿ.

180 ಕನ್ನಡದ ಬುದ್ಧಿಮತ್ತೆಯ ಓಲೆಗಳು

ಒಗಟುಗಳು ಜನಸಾಮಾನ್ಯರಲ್ಲಿ ಮನರಂಜನೆಗಾಗಿ ಬಳಕೆಗೊಳ್ಳುತ್ತಿದ್ದುವಾದರೂ ರಾಜಾಸ್ಥಾನಗಳಲ್ಲಿ ಪಂಡಿತಕವಿಗಳ ಕ್ಯೆಯಲ್ಲಿ ಅವು ವಿದ್ವತ್ತಿನ ಸ್ಪರ್ಧೆಯ ಉದ್ದೇಶಕ್ಕೂ ಒದಗುತ್ತಿದ್ದುವು. ಪಾಂಡಿತ್ಯಪ್ರದರ್ಶನ, ಕೀರ್ತಿಸಂಪಾದನೆ, ಧನಲಾಭ, ಪ್ರಣಯಸಾಫಲ್ಯ ಮುಂತಾದ ಪ್ರಯೋಜನಗಳೂ ಇವುಗಳಿಂದ ಸಿದ್ಧಿಸುತ್ತಿದ್ದಂತೆ ತೋರುತ್ತದೆ. ಒಗಟುಗಳ ಮೇಲೆ ಪಣ ಕಟ್ಟಿ ಜೂಜಾಡುವ ಪದ್ಧತಿಯೂ ಕೆಲವೆಡೆ ಇದ್ದಂತೆ ತಿಳಿದುಬರುತ್ತದೆ. ಒಗಟಿಗೆ ಸಂಬಂಧಿಸಿದ ದ್ಯೂತ ಸ್ಪರ್ಧೆ, ಮೇಳ, ಸಮಾರಂಭಗಳು ಗ್ರೀಕರಲ್ಲಿ ವಿಪರೀತವಾಗಿದ್ದುವು. ಅನೇಕ ಗ್ರೀಕ್ ರುದ್ರನಾಟಕಗಳಲ್ಲಿ ಒಗಟುಗಳೆ ಕ್ರಿಯೆಗೆ ಚಾಲಕಶಕ್ತಿಯಾಗಿ ಕೆಲಸ ಮಾಡಿರುವುದುಂಟು. ಸ್ಫಿಂಕ್ಸ್‌ಭೂತ ಈಡಿಪಸನಿಗೆ ಒಡ್ಡಿದ ಸಮಸ್ಯೆ ಬಹಳ ವಿಖ್ಯಾತವಾದದ್ದು; ಅದು ಜಗತ್ತಿನ ಪುರಾತನ ಒಗಟುಗಳಲ್ಲೊಂದು, ಅದು ಹೀಗಿದೆ; ಬೆಳಗ್ಗೆ ನಾಲ್ಕು ಕಾಲು, ಮಧ್ಯಾಹ್ನ ಎರಡು ಕಾಲು, ಸಂಜೆ ಮೂರು ಕಾಲುಗಳಲ್ಲಿ ನಡೆಯುವ ಪ್ರಾಣಿ ಯಾವುದು? ಉತ್ತರ-ಮನುಷ್ಯ! (ನೋಡಿ- ಈಡಿಪಸ್)

 

೪೫. ಕರಿ ಗುಡ್ಡ-ಬಿಳಿ ನೀರು ಅದ್ರಾಗೆ ಕುಂತವಳೇ ಚಂಪರಾಣಿ.-ಗಡಿಗೆಮಜ್ಜಿಗೆ.

೪೬. ಕೆಂಪು ಕುದುರೆ ಮೇಲೆ ಒಬ್ಬ ಏರುತ್ತಾನೆ, ಒಬ್ಬ ಇಳಿಯುತ್ತಾನೆ .-ರೊಟ್ಟಿದೋಸೆ

೪೭. ಕೆಂದ ಕುದುರೆ ,ಬಿಳಿ ತಡಿ, ಕರೆ ಲಗಾಮು, ಅಣ್ಣ ಅತ್ತಾನೆ, ತಮ್ಮ ಇಳಿತ್ತಾನೆ-ಬೆಂಕಿಸುಣ್ಣ ಹಚ್ಚಿದ ಹಂಚು, ಹೊಗೆ, ರೊಟ್ಟಿ

೪೮. ಕಂಬ ಕಂಬದ ಮೇಲೆ ದಿಂಬ, ದಿಂಬದ ಮೇಲೆ ಲಾಗಲೂಟೆ, ಲಾಗಲೂಟೆ ಮೇಲೆ ಎರಡು ಹುಡ್ಗರು ಓಡ್ಯಾಡುತಾರೆ.-ಕಣ್ಣು.

೪೯. ಶತ್ತಗಿಂಡಿ, ಶಾರಾಗಿಂಡಿ, ನೀರಾಗಿ ಹಕ್ಕಿದರೆ ಮುಳುಗದು ಮುತ್ತಿನ ಗಿಂಡಿ.-ಬೆಣ್ಣೆ ಉಂಡೆ.

೫೦.ಕುತ್ತಿಗೆ ಇದೆ ತಲೆ ಇಲ್ಲ, ತೋಳಿದೆ ಬೆರಳಿಲ್ಲ, ದಡಾ ಇದೆ, ಕಾಲಿಲ್ಲ.-ಅಂಗಿ.

೫೧. ಹಸಿರು ಗಿಡದ ಮೇಲೆ ಮೊಸರು ಚೆಲ್ಲಿದೆ-ಮಲ್ಲಿಗೆ

೫೨. ಅಂಗೈ ಅಗಲದ ರೊಟ್ಟಿಗೆ ಲೆಕ್ಕವಿಲ್ಲದಷ್ಟು ಉಪ್ಪಿನಕಾಯಿ-ಆಕಾಶನಕ್ಷತ್ರ

೫೩. ಸುಟ್ಟ ಹೆಣ ಮತ್ತೆ ಸುಡ್ತಾರೆ-ಇದ್ದಿಲು

೫೪. ಚಿನ್ನದ ಪೆಟ್ಟಿಗೆಯಲ್ಲಿ ಬೆಳ್ಳಿ ಲಿಂಗ- ಬಾಳೆ ಹಣ್ಣು

೫೫. ಅಂಗೈ ಕೊಟ್ಟರೆ ಮುಂಗೈನೂ ನುಂಗುತ್ತದೆ- ಬಳೆ

೫೬. ಒಂದು ಹಪ್ಪಳ ಊರಿಗೆಲ್ಲ ಊಟ– ಚಂದ್ರ

೫೭. ಆಕಾಶದಲ್ಲಿ ಕೊಡಲಿಗಳು ತೇಲಾಡುತ್ತವೆ- ಹುಣಸೇಹಣ್ಣು

೫೮. ನೀಲಿ ಕೆರೆಯಲಿ ಬಿಳಿ ಮೀನು-ನಕ್ಷತ್ರ

ಆದ್ದರಿಂದ ಒಗಟುಗಳೆಂದರೆ ರೂಪಕಗಳು ಅಥವಾ ಪ್ರತಿಮೆಗಳು ಎನ್ನಬಹುದು. ಇವುಗಳಲ್ಲಿ ಕೆಲವಂತೂ ಸುಂದರವಾದ ಕಾವ್ಯಗಳೇ. ಲೋಕಾನುಭವ, ಸೂಕ್ಷ್ಮ ಸಂವೇದನೆ, ಕಲ್ಪನಾಶಕ್ತಿಗಳು ಉತ್ತಮವಾದ ಒಗಟುಗಳಲ್ಲಿ ಕಂಡುಬರುತ್ತವೆ. ವಸ್ತುಗಳ ಯಥಾರ್ಥ ಚಿತ್ರಗಳನ್ನು ಸಂಕ್ಷಿಪ್ತವಾಗಿ ಕೊರೆದು ನಿಲ್ಲಿಸುವ ಶಕ್ತಿ ಒಗಟುಗಳಲ್ಲುಂಟು. ಇವುಗಳಿಗೆ ವಿಷಯವಾಗದ ಪದಾರ್ಥವೇ ಜಗತ್ತಿನಲ್ಲಿಲ್ಲ.

೫೯. ಒಂದು ತೇಲುತ್ತೆ ,ಒಂದು ಮುಳುಗುತ್ತೆ, ಒಂದು ಕರಗುತ್ತೆ.-ವಾರ,ತಿಂಗಳು,ವರ್ಷ

೬೦. ಬಾ ಅಂದರೆ ಬರೋಲ್ಲ , ಹೋಗು ಅಂದರೆ ಹೋಗೋಲ್ಲ-ಮಳೆ

೬೧. ನಾ ಇರುವಾಗ ಬರುತ್ತೆ , ನಾ ಹೋದ ಮೇಲೂ ಇರುತ್ತೆ-ಕೀರ್ತಿ

೬೨. ಬೆಳ್ಳಿ ಸಮುದ್ರದಲ್ಲಿ ಕಪ್ಪು ಸೂರ್ಯ-ಕಣ್ಣು

೬೩ ಅಕ್ಕನ ಮೇಲೆ ಛತ್ರಿ- ರೆಪ್ಪೆ

೬೪. ತಮ್ಮಂಗೆ ಮೂರು ಕಣ್ಣು ಅಮ್ಮಂಗೆ ಒಂದೇ ಕಣ್ಣು-ತೆಂಗಿನ ಕಾಯಿ

೬೫. ಅಕ್ಕ ಓದುತ್ತಾಳೆ ತಂಗಿ ನಡೀತ್ತಾಳೆ-ಕಣ್ಣು

೬೬.ಅಮ್ಮನ ಆಕಾಶವಾಣಿ ನಾನು-ಮಗು

೬೭. ಅಂಗಡಿಯಿಂದ ತರೋದು ಮುಂದಿಟ್ಟುಕೊಂಡು ಅಳೋದು-ಈರುಳ್ಳಿ

೬೮. ಅಂಗಣ್ಣ ಮಂಗಣ್ಣ ಅಂಗಿ ಬಿಚ್ಚಿಕೊಂಡು ನುಂಗಣ್ಣ- ಬಾಳೆಹಣ್ಣು

೬೯. ಗೂಡ್ನಲ್ಲಿರೋ ಜೋಡಿ ಪಕ್ಷಿ ಊರೆಲ್ಲ ನೋಡುತ್ತೆ-ಕಣ್ಣು

೭೦. ಒಂದು ಮಡಕೆ, ಮಡಕೆಯೊಳಗೆ, ಕುಡಿಕೆ, ಕುಡಿಕೆಯಲ್ಲಿ ಸಾಗರ-ತೆಂಗಿನ ಕಾಯಿ

೭೧. ನೀನಿಲ್ಲದೆ ಊಟವಿಲ್ಲ- ಉಪ್ಪು

೭೨. ಬಿಳಿ ಸರದಾರನಿಗೆ ಕರಿ ಟೋಪಿ-ಬೆಂಕಿಕಡ್ಡಿ

50 ಒಗಟುಗಳು ಮತ್ತು ಉತ್ತರಗಳು

೭೩. ಕಾಲಿಲ್ದ ಹುಡುಗಿಗೆ ಮಾರುದ್ದ ಕಡಿವಾಣ – ಸೂಜಿ

೭೪. ಮೂರು ಕಾಸಿನ ಕುದುರೆಗೆ ಮುನ್ನೂರು ರೂಪಾಯಿನ ಹಗ್ಗ-ಹೇನು ಕೂದಲು

೭೫. ಕೆಂಪು ಕುದುರೆಗೆ ಲಗಾಮು, ಓಬ್ಬ ಹತ್ತುತ್ತಾನೆ , ಇನ್ನೊಬ್ಬ ಇಳಿತಾನೇ-ಬೆಂಕಿ,ಬಾಣಲೆ, ದೋಸೆ

೭೬ . ಒಂದು ಮನೆಗೆ ಒಂದೇ ತೊಲೆ-ತಲೆ

೭೭. ಕಂದ ಬಂದ ಕೊಂದ ತಂದ-ಶ್ರೀ ರಾಮ ಚಂದ್ರ

೭೮. ಕಲ್ಲಿಲ್ಲದ ಬೆಟ್ಟ ಮರಳಿಲ್ಲದ ಮರುಭೂಮಿ-ಭೂಪಟ

೭೯. ಚಿಕ್ಕಕ್ಕನಿಗೆ ಪುಕ್ಕುದ್ದ-ಸೌಟು

೮೦. ಎರಡು ಮನೆಗೆ ಒಂದೇ ದೂಲ-ಮೂಗು

೮೧. ನೀರಿರೋತಾವ ನಿಲ್ಲಲೇ ಕೋಣ-ಚಪ್ಪಲಿ

೮೨. ಹೋದ ನೆಂಟ, ಬಂದ ದಾರಿ ಗೊತ್ತಿಲ್ಲ-ನೆರಳು

೮೩. ಮರದೊಳಗೆ ಮರ ಹುಟ್ಟಿ ಮರ ಚಕ್ರ ಕಾಯಾಗಿ ತಿನ್ನಬಾರದ ಹಣ್ಣು ಬಲು ರುಚಿ-ಮನುಷ್ಯನ ಹುಟ್ಟು ಮಗು

೮೪. ಕಲ್ಲರಳಿ ಹೂವಾಗಿ, ಎಲ್ಲರಿಗೂ ಬೇಕಾಗಿ, ಮಲ್ಲಿಕಾರ್ಜುನನ ಗುಡಿಗೆ ಬೆಳಕಾಗಿ, ಬಲ್ಲವರು ಹೇಳಿ –ಸುಣ್ಣ

೮೫. ಚಿಣಿಮಿನಿ ಎನ್ನುವ ಕೆರೆ, ಚಿಂತಾಮಣಿ ಎನ್ನುವ ಹಕ್ಕಿ, ಕೆರೆ ಬತ್ತಿದರೆ ಹಕ್ಕಿಗೆ ಮರಣ –ದೀಪ

೮೬. ಹೋಗುತ್ತಾ, ಬರುತ್ತಾ ಇರುವುದು ಎರಡು,ಹೋದ ಮೇಲೆ ಬರಲಾರವು ಎರಡು-ಸಿರಿತನ-ಬಡತನಪ್ರಾಣ -ಬಡತನ

೮೭. ಒಂದು ಹಸ್ತಕ್ಕೆ ನೂರೆಂಟು ಬೆರಳು-ಬಾಳೆಗೊನೆ

೮೮. ಎಲ್ಲರ ಮನೆ ಅಜ್ಜಿಗೆ ಮೈಯೆಲ್ಲಾ ಕಜ್ಜಿ –ಜರಡಿ

೮೯. ಎಂದರೆ ತೆರಿತಾವ, ಅಪ್ಪ ಎಂದರೆ ಮುಚ್ಚುತಾವ-ಬಾಯಿ

೯೦. ದಾಸ್ ಬುರುಡೆ ದೌಲಥ ಬುರುಡೆ, ಲೋಕಕ್ಕೆಲ್ಲ ಎರಡೇ ಬುರುಡೆ-ಸೂರ್ಯ ಚಂದ್ರ

೯೧. ಅಪ್ಪ ಆಕಾಶಕ್ಕೆ ಅವ್ವ ಪಾತಾಳಕ್ಕೆ ಮಗ ವ್ಯಾಪಾರಕ್ಕೆ ಮಗಳು ಮದುವೆಗೆ –ಅಡಿಕೆ ಮರ

೯೨.ಹಾರಾಡುತ್ತಿದೆ ಗಾಳಿಪತವಲ್ಲ , ಬಣ್ಣ ಮೂರಿರುವುದು ಕಾಮನಬಿಲ್ಲಲ್ಲ-ಧ್ವಜ

೯೩. ನೀಲಿ ಸಾಗರದಲ್ಲಿ ಬೆಳ್ಳನೆ ಮೀನುಗಳು ನಾನ್ಯಾರು?-ತಾರೆಗಳು

೯೪. ಬಿಡಿಸಿದರೆ ಹೂವು, ಮದಚಿದರೆ ಮೊಗ್ಗು ,ಇದು ಏನು?-ಛತ್ರಿ

೯೫. ಆರು ಕಾಲು ಅಂಕಣ್ಣ ಮೂರು ಕಾಲು ದೊಂಕಣ್ಣ ಸದಾ ಮೀಸೆ ತಿರುವಣ್ಣ-ನೊಣ

100 ಒಗಟುಗಳು ಮತ್ತು ಉತ್ತರಗಳು

kannada ogatugalu with answer

೯೬. ಒಂಟಿಕಾಲಿನ ಕುಂಟ. ನಾನ್ಯಾರು?-ಬುಗರಿ

೯೭. ಕಪ್ಪು ಕಂಬಳಿ ನೆಂಟ ಎಲ್ಲವನು ನಾಶ ಮಾಡೋಕೆ ಹೊಂಟ-ಇಲಿ

೯೮. ಹಲ್ಲು ಹಾಕಿದರೆ ಹಾಲು ಕೆಡೋಲ್ಲ ಕಲ್ಲು ಹಾಕಿದರೆ ಕೆಡುತ್ತೇ-ಕಳ್ಳಿ

೯೯. ಕಾಡಿನಲ್ಲಿ ಹುಟ್ಟುವುದು ಕಾಡಿನಲ್ಲಿ ಬೆಳೆಯುವುದು ಕಡಿದಲ್ಲಿ ಕಂಪ ಸೂಸುವೆನು-ಶ್ರೀಗಂಧ

೧೦೦. ಹಸಿರು ಕೋಟೆ, ಬಿಳಿ ಕೋಟೆ, ಕೆಂಪಿನ ಕೋಟೆ ಈ ಕೋಟೆಯೊಳಗೆ ಕಪ್ಪು ಸಿಪಾಯಿಗಳು-ಪರಂಗಿ ಹಣ್ಣು

೧೦೧.ಒಂದು ಮನೆಯಲ್ಲಿ ಮೂರು ಜನ ಅಕ್ಕ-ತಂಗಿಯರಿದ್ದಾರೆ ಆದರೆ ಒಬ್ಬರ ಮುಖ ಕಂಡರೆ ಒಬ್ಬರಿಗೆ ಕಾಣೋಲ್ಲ- ಜಾದಳಕಾಯಿ

೧೦೨. ಅಂಕಡೊಂಕಿನ ಬಾವಿ ಹೊಕ್ಕು ನೋಡಿದ್ರೆ ಮುಕ್ಕ ನೀರಿಲ್ಲ-ಕಿವಿ

೧೦೩. ಕೆಂಪು ಕುದುರೆ ಕರಿ ತಡಿ ಒಬ್ಬ ಏರುತಾನೆ ಒಬ್ಬ ಇಳಿತಾನೆ-ರೊಟ್ಟಿ

೧೦೪. ಮೂರೂ ಪಕ್ಷಿಗಳು ಗೂಡಿಗೆ ಹೋಗುವಾಗ ಬೇರೆ ಬೇರೆ ಬಣ್ಣ ಬರುವಾಗ ಬಣ್ಣ-ಎಲೆ ಅದಿಕೆ

೧೦೫. ಆಕಾಶದೊಳಗಿನ ಗಿಣಿ ಊಟದ ಹೊತ್ತಿಗೆ ರಾಣಿ-ಬಾಳೆಲೆ

೧೦೬. ಎರಡು ಬಾವಿಗಳ ನಡುವೆಯೊಂದು ಸೇತುವೆ-ಮೂಗು

೧೦೭. ತಲೆ ಇಲ್ಲ , ನಡು ಇಲ್ಲ , ಕೈಗಳಿದ್ದರು ಬೆರಳಿಲ್ಲ-ಕೋಟು ಅಂಗಿ

೧೦೮. ತಿಂಡಿಗೆ ಕಡಿಮೆ ಇಲ್ಲ ,ತೀರ್ಥ ಕುಡಿದರೆ ಸಾವು –ವಿಷ

೧೦೯ . ಒಬ್ಬಳು ಮುಲುಗಿದಳು, ಒಬ್ಬಳು ಕರಗಿದಳು , ಒಬ್ಬಳು ತೇಲಿದಳು –ಅಡಿಕೆ ಸುಣ್ಣ

೧೧೦.ಹೋಗೋದು ಮುಳುಗೋದು ತರೋದು ಏನು?-ಬಿಂದಿಗೆ

೧೧೧. ಕಿರೀಟ ಇದೆ ರಾಜ ಅಲ್ಲ, ಕಲ ತಿಳಿಸುತ್ತ್ತೆ ಗಡಿಯಾರವಲ್ಲ-ಕೋಳಿ

೧೧೨. ಒಂದು ಹಣ್ಣಿಗೆ ಹನ್ನೆರಡು ತೊಳೆ ಮತ್ತೂ ಮೂವತ್ತು ಬೀಜ-ವರ್ಷ

೧೧೩. ಗುಂಡಾಕಾರ ಮೈಯೆಲ್ಲಾ ತೂತು-ದೋಸೆ

೧೧೪.ಬಂಗಾರದ ಗುಬ್ಬಿ ಬಾಲದಲ್ಲೇ ನೀರನ್ನು ಕುಡಿಯುತ್ತೆ-ಚಿಮಿಣಿ

೧೧೫. ಒಂದು ಮರ , ಮರದಾಗ ಅಲ್ಲ, ಅಲ್ಲಿನಾಗ ಕೊಬ್ರಿ ಗುಂಡ-ಆಕಾಶ ನಕ್ಷತ್ರ ಚಂದ್ರ

೧೧೬. ಅನ್ನ ಮಾಡಲಿಕ್ಕೆ ಬಾರದಂತಹ ಅಕ್ಕಿ ಯಾವುದು-ಏಲಕ್ಕಿ

೧೧೭. ಬೆಳ್ಳಿ ಬಟ್ಟಲಲ್ಲಿ ಮುತ್ತಿನ ಬಿಂದು-ತಾರೆ

ಹೊಸ ಒಗಟುಗಳು

ಹೊಸ ಒಗಟುಗಳು

೧೧೮. ಲಟಪಟ ಲೇಡಿಗೆ ಒಂದೇ ಕಣ್ಣು-ಸೂಜಿ

೧೧೯. ಹಸಿರು ಕೋಲಿಗೆ ಮುತ್ತಿನ ತುರಾಯಿ-ಜೋಳದ ತೆನೆ

೧೨೦. ಬಿಳಿ ಹುಲ್ಲಲ್ಲಿ ಕೆಂಪು ಕುರಿಮರಿ-ನಾಲಿಗೆ

೧೨೧. ಸೂಜಿ ಸಣ್ಣಕಾಗೆ ಬಣ್ಣ –ಕೂದಲು

೧೨೨. ಹೋದರು ಇರುತ್ತೆ ಬಂದರೂ ಕಾಡುತ್ತೆ.ಇದು ಏನು?-ನೆನಪು

೧೨೩. ಆರು ಕಾಲಿನ ಆನೆ, ಆನೆ ತಿನ್ನುತ್ತೆ ನೀರು ಕುಡಿಯಲ್ಲ-ನುಸಿ

೧೨೪. ಊರಿಗೆಲ್ಲ ಒಂದೇ ಕಂಬಳಿ-ಆಕಾಶ

೧೨೫. ಅಟ್ಟದ ಮೇಲೆ ಪುಟ್ಟ ಲಕ್ಷ್ಮಿ-ಕುಂಕುಮ

೧೨೬. ಕರಿ ಹೊಲದ ಮದ್ಯದಲ್ಲಿ ಬೇಲಿ ದಾರಿ-ಬೈತಲೆ

೧೨೭. ಒಂದು ಬತ್ತಿ ಮನೆಯೆಲ್ಲ ಬೆಳಕು-ಸೂರ್ಯ

೧೨೮.ಕಣ್ಣಿಗೆ ಕಾಣೋದಿಲ್ಲ, ಕೈಗೆ ಸಿಗೋದಿಲ್ಲ –ಗಾಳಿ

೧೨೯. ಕಣ್ಣಿಗೆ ಹತ್ತಿರ ಕಾಲಿಗೆ ದೂರ-ಬೆಟ್ಟ

೧೩೦. ಊಟಕ್ಕೆ ಮೊದಲು ನಾನು ಅಂತ ಬರುತ್ತೆ –ಬಾಳೆ ಎಲೆ ತಟ್ಟೆ

೧೩೧. ಹಸಿರು ಮೈ ಹಳದಿ ಮೈ ಪೇಟೇಲಿ ಕುಳಿತು ಎಲ್ಲರನ್ನು ಕರೆಯುತ್ತೆ-ಮಾವು

೧೩೨. ಹುಲಿಯ ಚಿಕ್ಕಮ್ಮ , ಇಲಿಯ ಮುಕ್ಕಮ್ಮ-ಬೆಕ್ಕು

೧೩೩. ಕೂಗಿದರೆ ರಾವಣ, ಹಾರಿದರೆ ಹನುಮಂತ, ಕೂತರೆ ಮುನಿ-ಕಪ್ಪೆ

೧೩೪. ಕಲ್ಲಲ್ಲಿ ಹುಟ್ಟುವುದು, ಕಲ್ಲಲ್ಲಿ ಬೆಳೆಯುವುದು, ನೆತ್ತಿಯಲ್ಲಿ ಕುತಗುಟ್ಟುವುದು-ಸುಣ್ಣ

೧೩೫. ಕಾಂತಾಮಣಿ ಎಂಬ ಪಕ್ಷಿ, ಚಿಂತಾಮಣಿ ಎಂಬ ಕೆರೆ, ಕೆರೆಯಲ್ಲಿ ನೀರಿಲ್ದೆ ಹೋದ್ರೆ ಪಕ್ಷಿಗೆ ಮರಣ-ದೀಪ

೧೩೬. ಕಲ್ಲು ತುಳಿಯುತ್ತೆ, ಮುಳ್ಳು ಮೆಯುತ್ತೆ, ನೀರು ಕಂಡ್ರೆ ನಿಲ್ಲುತ್ತೆ-ಚಪ್ಪಲಿ

೧೩೭. ಕಾಲಿಲ್ಲದೇ ನಡೆಯುವುದು, ತಲೆ ಎಲ್ಲಡೆ ನುಡಿಯುವುದು, ಮೇಲು ಕೆಳಗಾಗಿ ಓದುವುದು-ನದಿ

೧೩೮. ಜಂಬು ನೇರಳೆ ಮರ, ಎಳೆದರೆ ನಾಲ್ಕು ಬಾವಿ ನೀರು ಒಂದೇ ಆಗುತ್ತದೆ-ಮೇಡು

೧೩೯. ಇಡೀ ಮನೆಗೆಲ್ಲ ಒಂದೇ ಕಂಬಳಿ, ಬಾಯಿ ತೆರೆದರೆ ಮೂಗು ಮುಚ್ಚುತ್ತಿ-ಆಕಾಶ

೧೪೦. ಒಂದು ಕಾಲಿನ ಪಕ್ಷಿಗೆ ಒಂಭತ್ತು ರೆಕ್ಕೆ, ಒಂದೇ ಕಾಲಲಿ ನಿಂತು ನೂರಾರು ಮೊಟ್ಟೆ ಇಡುತ್ತದೆ-ಜೋಳದ ದಂಟು

೧೪೧. ಎತ್ತ ಹೋದರು ಕುತ್ತಿಗೆಗೆ ಕೈ ಹಾಕುತ್ತಾರೆ! ನಾನ್ಯಾರು?-ಸಾಲಿಗ್ರಾಮ

೧೪೨. ಕರಿ ಹುಡುಗನಿಗೆ ಬಿಳಿ ಟೋಪಿ –ಹೆಂಡದ ಮಡಿಕೆ

೧೪೩. ಬಿಳಿ ಆಕಾಶದಲ್ಲಿ ಕಪ್ಪು ನಕ್ಷತ್ರಗಳು,ಇದನ್ನು ನೋಡಲು ಜನ ಕಾದಿಹರು-ನಾಣ್ಯ

೧೪೪. ಗೋಡೆ ಗುದ್ದಪ್ಪ ನೀನಿದ್ದಲ್ಲಿ ನಿದ್ದೆ ಇಲ್ಲಪ್ಪ.-ತಿಗಣೆ

೧೪೫. ಕುದುರೆ ಬಾಲದಿಂದ ನೀರು ಕುಡಿಯುತ್ತದೆ-ಹೇನು

10 ಒಗಟುಗಳು ಮತ್ತು ಉತ್ತರಗಳು

ಒಗಟುಗಳು ನಮ್ಮ ಮನಸ್ಸಿನ ಚುರುಕನ್ನು ಹೆಚ್ಚಿಸುತ್ತವೆ ಮತ್ತು ಬುದ್ಧಿವಂತಿಕೆಯನ್ನು ಪರೀಕ್ಷಿಸುತ್ತವೆ. ಇಲ್ಲಿ 10 ಚಾತುರ್ಯಪೂರ್ಣ ಕನ್ನಡ ಒಗಟುಗಳು ಮತ್ತು ಅವುಗಳ ಉತ್ತರಗಳನ್ನು ನೀಡಲಾಗಿದೆ, ನಿಮ್ಮ ಮನಸ್ಸನ್ನು ಪುನೀತಮಾಡಲು.

10 ಒಗಟುಗಳು ಮತ್ತು ಉತ್ತರಗಳು

೧೪೬. ಬಿಳಿ ಸಾಮ್ರಾಜ್ಯದಲ್ಲಿ ಕಪ್ಪು ಪ್ರಜೆಗಳು.-ಸೀತ ಫಲ

೧೪೭. ಅಣ್ಣ ಅತ್ತರೆ ತಮ್ಮನೂ ಅಳುತ್ತಾನೆ.-ಕಣ್ಣು

೧೪೮. ಮನೆ ಮೇಲೆ ಮಲ್ಲಿಗೆ ಹೂವು.-ಮಂಜು

೧೪೯. ಹಾರಿದರೆ ಹನುಮಂತ ಕೂಗಿದರೆ ಶಂಖ.-ಕಪ್ಪೆ

೧೫೦. ನೋಡಿದರೆ ಕಲ್ಲು ನೀರು ಹಾಕಿದರೆ ಮಣ್ಣು.-ಸುಣ್ಣ

೧೫೧.ಸುದ್ದಿ ಸೂರಪ್ಪ ದೇಶವೆಲ್ಲಾ ಸುತ್ತಾಡ್ತಾನೆ.-ಪೋಸ್ಟ್ ಕಾರ್ಡ್

೧೫೨. ಬಿಳಿ ಕುದುರೆಗೆ ಹಸಿರು ಬಾಲ.-ಮೂಲಂಗಿ

೧೫೩. ಚಿಕ್ಕ ಬೆಟ್ಟದಲ್ಲಿ ಪುಟ್ಟ ಚಂದ್ರ.-ಕುಂಕುಮ

೧೫೪. ಬರೋದ ಕಂಡು ಕೈ ಒಡ್ತಾರೆ.-ಬಸ್

೧೫೫. ಹತ್ತಾರು ಮಕ್ಕಳ ತಂದೆ ಅದಕ್ಕೆ ತಲೆಯ ಮೇಲೆ ಜುಟ್ಟು-ಹುಂಜ

೧೫೬. ಹಸಿರು ಮುಖಕ್ಕೆ ವಿಪರೀತ ಕೋಪ , ಕೋಪ ಮಾಡಿಕೊಳ್ಳದೆ ನಾನ್ಯಾರೆಂದು ಹೇಳಿ?-ಮೆಣಸಿನಕಾಯಿ

೧೫೭. ಅಜ್ಜಿ ಗುದ್ದಿದರೆ ಮನೆಯೆಲ್ಲ ಮಕ್ಕಳು ಈಗ ಹೇಳಿ ನಾನ್ಯಾರು-ಬೆಳ್ಳುಳ್ಳಿ

೧೫೮. ಹಗಲಲ್ಲಿ ಮಾಯಾ ರಾತ್ರಿಯಲ್ಲಿ ಪ್ರತ್ಯಕ್ಷ ?ನಾನ್ಯಾರು ಹೇಳಿ?-ನಕ್ಷತ್ರ

೧೫೯.ಹಗ್ಗ ಹಾಸಿದೆ ಕೋಣ ಮಲಗಿದೆ-ಕುಂಬಳಕಾಯಿಬಳ್ಳಿ

೧೬೦. ನನ್ನ ಕಂಡರೆ ಎಲ್ಲರು ಓದೀತಾರೆ –ಚೆಂಡು

೧೬೧. ಹಳ್ಳಿ ಗಡಿಯಾರ, ಒಳ್ಳೆ ಆಹಾರ-ಕೋಳಿ

೧೬೨. ನೀರು ಇರುತ್ತೆ ನದಿ ಅಲ್ಲ, ಬಾಗಿಲು ಇರುತ್ತೆ ಮನೆ ಅಲ್ಲ-ಕಣ್ಣು.

೧೬೩. ಬಲಗೈಯಲ್ಲಿ ಗೀತೆ ಎಡಗೈಯಲ್ಲಿ ರಾಟೆ ಹಿಡಿದಿದ್ದೆ ನಾನು ಯಾರು-ಗಾಂಧೀಜಿ

೧೬೪. ಬಾಯಲ್ಲಿ ಹಲ್ಲಿಲ್ಲ, ಮಯಲ್ಲಿ ಶಕ್ತಿ ಇಲ್ಲ , ತಲೆಯಲ್ಲಿ ಕೂದಲಿಲ್ಲ , ಆದ್ರೂ ಎಲ್ರುನ್ನು ಕಾಡತಿನಿ ನಾನ್ಯಾರು.-ಸೊಳ್ಳೆ

೧೬೫. ಅಕ್ಷರಗಳಿದ್ದರೂ ಪುಸ್ತಕವಲ್ಲ,ಸಿಂಹವಿದ್ದರೂ ಅರಣ್ಯವಲ್ಲ,ದುಂಡಾಗಿದ್ದರೂ ಚಕ್ರವಲ್ಲ,ನಾನ್ಯಾರು.-ನಾಣ್ಯ

೧೬೬. ಗಂಟೆ ಹೊಡೆಯುತ್ತಾನೆ ಪೂಜಾರಿ ಅಲ್ಲ, PAPER ಅರಿಯುತ್ತಾನೆ ಆದರೆ ಹುಚ್ಚುನೂ ಅಲ್ಲ, ಹಣ ಕೇಳುತ್ತಾನೆ ಭಿಕ್ಷುಕ ಅಲ್ಲ –ಕಂಡಕ್ಟರ್

೧೬೯. ಹಿಡಿದರೆ ಹಿಡಿಯಷ್ಟು ಬಿಟ್ಟರೆ ಮನೆತುಂಬ-ದೀಪದ ಬೆಳಕು

೧೭೦. ಕಾಲಿಲ್ಲದೆ ನಡೆಯುವುದು ಬಾಯಿಲ್ಲದೆ ನುಡಿಯುವುದು ಇದರ ಹೊಟ್ಟೆ ಹಲವಕ್ಕೆ ಮನೆಯಾಗಿರುವುದು-ನದಿ

೧೭೧. ಚೋಟುದ್ದ ಹುಡುಗಿಗೆ ಮಾರುದ್ದ ಜಡೆ – ಸೂಜಿ ದಾರ

೧೭೨. ಊರುಂಟು ಜನರಿಲ್ಲ ನದಿಯುಂಟು ನೀರಿಲ್ಲ – ಭೂಪಟ.

೧೭೩. ಚಿಕ್ಕ ಬೋರನಿಗೆ ಬಾಲದಲ್ಲಿ ಕತ್ತಿ : ಹುರಳಿಕಾಯಿ

೧೭೪. ಬಿಳಿಯ ಹೊಲದಲ್ಲಿ ಕರಿ ಕಾಳು ಕೈಯಲ್ಲಿ ಬಿತ್ತುತ್ತಾರೆ ಬಾಯಲ್ಲಿ ಏತ್ತುತ್ತಾರೆ ನಾನು ಯಾರು : ಪುಸ್ತಕ ಮತ್ತು ಅಕ್ಷರಗಳು

೧೭೫. ಮೂರು ಕಡೆ ನೀರು ನೆತ್ತಿ ಮೇಲೆ ಬೆಟ್ಟ ಹಾಗಾದರೆ ನಾನು ಯಾರು? : ಭಾರತ

೧೭೬. ನಾಲ್ಕು ಕಂಬಗಳುಂಟು ದೇವಾಲಯವಲ್ಲ; ಎರಡು ಮೊರಗಳುಂಟು ಕೇರಲಾಗುವುದಿಲ್ಲ; ಒಂದು ಕಹಳೆಯುಂಟು ಊದಲಾಗುವುದಿಲ್ಲ; ಹಾಗಾದರೆ ನಾನು ಯಾರು? : ಆನೆ

೧೭೭. ಮೂರು ಕಡೆ ನೀರು ನೆತ್ತಿ ಮೇಲೆ ಬೆಟ್ಟ ಹಾಗಾದರೆ ನಾನು ಯಾರು? : ಭಾರತ

೧೭೮. ಕರಿ ಕಂಬ್ಳಿ ನೆಂಟ, ಸರೊತ್ತಿನಲ್ಲಿ ಹೊಂಟ, ಅವನ್ಯಾರು? : ಹೆಗ್ಗಣ

೧೭೯. ರಾಮನಂತ ಸಮುದ್ರ ರತ್ನದಂತ ಮೀನು ನೀರು ಬತ್ತಿಹೋದ್ರೆ ಮೀನು ಸತ್ತು ಹೋಗುತ್ತೆ : ದೀಪ / ಹಣತೆ

೧೮೦. ಕಲ್ಲರಳಿ ಹೂವಾಗಿ, ಎಲ್ಲರಿಗು ಬೇಕಾಗಿ,. ಮಲ್ಲಿಕಾರ್ಜುನನ ಶಿಖರಕ್ಕೆ ಬೆಳಕಾಗಿ. ಬಲ್ಲವರು ಹೇಳಿ ಸರ್ವಜ್ಞ”-ಸುಣ್ಣದ ಕಲ್ಲು!

 

 

Leave a Comment